ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಈ ಕುರಿತು ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎನ್.ಎಸ್ ಬೋಸರಾಜು, ಕೇಂದ್ರ ಸರ್ಕಾರದ ಅಸಹಕಾರದ ನಡುವೆ ಒಳ್ಳೆಯ ಬಜೆಟ್ ಮಂಡನೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ದಿಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.
ಬಿಜೆಪಿಯವರಿಗೆ ಆರೋಪ ಮಾಡೋದು ಬಿಟ್ಟರೇ ಬೇರೆ ಏನ್ ಇದೆ. ಸಿದ್ದರಾಮಯ್ಯ ಸಿಎಂ ಆಗಿರುವವರೆಗೂ ಬಜೆಟ್ ಮಂಡಿಸುತ್ತಾರೆ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣದಲ್ಲಿದ್ದರು. ಹೈಕಮಾಂಡ್ ಹೇಳಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಕೇಂದ್ರಕ್ಕೆ ಹೋದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ ಎಂದು ಎನ್ ಎಸ್ ಬೋಸರಾಜು ತಿಳಿಸಿದರು.
Key words: Good budget, CM Siddaramaiah, Minister, N.S. Bosaraju







