Saturday, September 12, 2026

BDA Apartments

Home Front Page ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ ಬಜೆಟ್ ನಲ್ಲಿ ಉಡುತೊರೆಹಳ್ಳ ನೀರಾವರಿ ಯೋಜನೆ”ಯನ್ನು ಘೋಷಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ನನ್ನಲ್ಲಿ ಮನವಿ ಮಾಡಿದ್ದರು.

ಮಕ್ಕಳ ಕೋರಿಕೆಯ ಮೇರೆಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದಾಗ‌ ಆ ಹಳ್ಳಿಗೆ ಸಮರ್ಪಕ ನೀರಾವರಿ ಯೋಜನೆಯೊಂದರ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್ ನಲ್ಲಿ “ಉಡುತೊರೆಹಳ್ಳ ನೀರಾವರಿ ಯೋಜನೆ”ಯನ್ನು ಘೋಷಿಸಿ, ರೂ.490 ಕೋಟಿ ಅನುದಾನವನ್ನು ಸಹ ಮೀಸಲಿಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

ಅಹವಾಲು ಸಲ್ಲಿಸಿದ ಮಕ್ಕಳ ಧ್ವನಿ ಎಳೆಯದಾದರೂ, ಅದನ್ನು ಕಡೆಗಣಿಸದೆ ಮುಕ್ತವಾಗಿ‌ ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸುವ ಗುಣ ನಮ್ಮ ಸರ್ಕಾರದ್ದು. ಪುಟಾಣಿ ಮಕ್ಕಳ‌ ಧನ್ಯವಾದವನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ನುಡಿದಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ, ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ತಮ್ಮ ಕಷ್ಟವನ್ನು ನಮ್ಮ ಗಮನಕ್ಕೆ ತಂದು, ಇಂದು ಸಾವಿರಾರು ಕುಟುಂಬಗಳ ಭವಿಷ್ಯ ಬದಲಾಗಲು ಕಾರಣರಾದ ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Key words: Budget, childrens, letter, CM Siddaramaiah