Wednesday, July 29, 2026

BDA Apartments

Home Front Page ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ ವರುಣಾ ಕ್ಷೇತ್ರದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಇಂದು ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ವರಕೋಡು ಗ್ರಾಮದಲ್ಲಿ ಬೀರೇಶ್ವರಸ್ವಾಮಿ ದೇವಸ್ಥಾನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನ ಉಸಿರು ಇರುವವರೆಗೂ ಜನರ ಸೇವೆಯನ್ನ ಮಾಡುತ್ತೇನೆ. ನನ್ನ ರಾಜಕೀಯದಲ್ಲಿ ಸೋಲು ಗೆಲುವು ಕಂಡಿದ್ದೇನೆ. ಚುನಾವಣೆಯಲ್ಲಿ ಸೋತಾಗಲೂ ನಾನು ಜನ ಸೇವೆ ಬಿಟ್ಟಿಲ್ಲ ಎಂದರು.

ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ ಮಗ ಯತೀಂದ್ರ ಬರುತ್ತಾರೆ.  ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Key words: Yathindra, politically, Mysore Varuna, CM, Siddaramaiah