ಬೆಂಗಳೂರು,ಮಾರ್ಚ್,13,2026 (www.justkannada.in): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಆಗ್ರಹ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮುಂದಿನ ದಿನಗಳಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಆ ಬಗ್ಗೆ ತೀರ್ಮಾನ ಮಾಡಲಿದೆ ಎಂದಿದ್ದಾರೆ.
ವಿಧಾನಪರಿಷತ್ ನಲ್ಲಿ ಶೂನ್ಯವೇಳೆಯಲ್ಲಿ ಶಾಸಕ ರಮೇಶ್ಬಾಬು ಅವರ ಈ ಬಗ್ಗೆ ಪ್ರಸ್ತಾಪಿಸಿದರು. ವಾಟಾಳ್ ನಾಗರಾಜ್ ರಂತಹ ಅನೇಕ ಮಹನೀಯರು ಕನ್ನಡ ಜಲ ನೆಲದ ವಿಷಯವಾಗಿ ನಿರಂತರ ಹೋರಾಟ ಮಾಡಿದ್ದಾರೆ. ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವುದು ಅವಶ್ಯಕ. ಕನ್ನಡಪರ ಚಳವಳಿಗಾರರು ಹೋರಾಟಗಾರರಿಗೆ ವಿಧಿಸಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು ಹಾಗೂ ಕನ್ನಡ ಪರ ಸಂಘ ಸಂಸ್ಥೆಗಳಿಗೆ ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಶಿವರಾಜ್ ತಂಗಡಗಿ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಾಗಿದ್ದು ನಿಜ. ವಾಟಾಳ್ ನಾಗರಾಜು ಅವರು ಹಿರಿಯರಿದ್ದು, ಕನ್ನಡಪರ ಹೋರಾಟ ಮಾಡುತ್ತಾ ಬಂದಿದ್ದಾರೆ. ಈಗಾಗಲೇ ಕನ್ನಡಪರ ಸಂಘಟನೆಗಳ ಮೇಲೆ ವಿಧಿಸಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆಯೂ ಚರ್ಚೆಯಾಗಿದ್ದು, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಆ ಸಮಿತಿ ತೀರ್ಮಾನ ಮಾಡಲಿದೆ ಎಂದರು.
Key words: Rajyotsava award, Vatal Nagaraju, Minister, Shivraj Thangadgi







