ತುಮಕೂರು, ಮಾರ್ಚ್, 21,2026 (www.justkannada.in): ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಬಳಿ ನಡೆದಿದೆ.
ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನರಸಿಂಹಮೂರ್ತಿ ಮತ್ತು ನವೀನ್ ಇಬ್ಬರು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದೆ. KSRTC ಬಸ್ ಡಿಕ್ಕಿ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
Key words: Government bus, collision, Two die







