Friday, August 7, 2026

BDA Apartments

Home Front Page ಬಂಡಾಯ ಎದ್ದವರನ್ನು ಸಮಾಧಾನಿಸಲು ಪ್ರಯತ್ನಿಸುತ್ತೇವೆ- ಸಿಎಂ ಸಿದ್ದರಾಮಯ್ಯ

ಬಂಡಾಯ ಎದ್ದವರನ್ನು ಸಮಾಧಾನಿಸಲು ಪ್ರಯತ್ನಿಸುತ್ತೇವೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಮಾರ್ಚ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ  ಬಂಡಾಯ ಎದ್ದವರನ್ನು ಸಮಾಧಾನ ಮಾಡಲು ಪ್ರಯತ್ನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಸಮಾಧಾನಗೊಂಡವರನ್ನು ಮನವೊಲಿಸುತ್ತೇವೆ. ಅಲ್ಪಸಂಖ್ಯಾತ ನಾಯಕರು ಎಲ್ಲರೂ ಸೇರಿ‌ ಒಮ್ಮತದ ನಿರ್ಧಾರ ಮಾಡಿದ್ದೇವೆ. ಸಾದಿಕ್ ಪೈಲ್ವಾನ್ ಸಮಾಧಾನ ಮಾಡುವ ಪ್ರಯತ್ನ ಮಾಡುತ್ತೇವೆ. ಅಲ್ಪಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ ಎಂದರು.

ಕಳೆದ ಉಪಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಮಗ, ಕುಮಾರಸ್ವಾಮಿ ಮಗ ಅವರನ್ನೇ ಸೋಲಿಸಿಲ್ವ? ನಾವು ನುಡಿದಂತೆ ನಡೆದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ದಲಿತರು, ಹಿಂದುಳಿದವರು, ಬಡವರು ಅಲ್ಪಸಂಖ್ಯಾತರು ಎಲ್ಲರೂ ನಮ್ಮ ಪರವಾಗಿದ್ದಾರೆ. ನಾವು ಖಂಡಿತ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: Davangere South, By-Election, CM Siddaramaiah