ದಾವಣಗೆರೆ,ಏಪ್ರಿಲ್,1,2026 (www.justkannada.in): ಒಳಮೀಸಲಾತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನೇಮಕಾತಿಗಳು ಸ್ಥಗಿತಗೊಂಡು ಉದ್ಯೋಗಾಕಾಂಕ್ಷಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಉಪಚುನಾವಣೆಗೆ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಜಾರಿ, ನೇಮಕಾತಿ ಪ್ರಾರಂಭ ವಿಚಾರವನ್ನು ಸರ್ಕಾರ ಮುಂದೂಡಿಕೆ ಮಾಡಿದೆ.
ಈ ಬಗ್ಗೆ ಮಾತನಾಡಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ನೀತಿಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಯಾಗುತ್ತದೆ. 56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಅನ್ವಯ ಆಗುತ್ತೆ ಎಂದಿದ್ದಾರೆ.
ಈಗ ಭೇಕಾಗಿರುವುದು ರೋಸ್ಟರ್ ಪದ್ದತಿ. 101 ಉಪಜಾತಿಗಳಲ್ಲಿ ಎಬಿಸಿ ಮಾಡಿ ರೋಸ್ಟರ್ ಜಾರಿಗೆ ತರಬೇಕು ಈ ಬಗ್ಗೆ ರಾಜ್ಯ ಸರ್ಕಾರದ ಸಿಎಸ್ ಅಧ್ಯಕ್ಷತೆಯಲ್ಲಿ ಸಮಿತಿ ಆಗುತ್ತೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
Key words: Internal reservation, implement, Minister, K.H. Muniyappa







