ದಾವಣಗೆರೆ,ಏಪ್ರಿಲ್,3,2026 (www.justkannada.in): ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ವಿಫಲವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ನಾಯಕರು ನಮ್ಮನ್ನು ‘ಸಾಲದ ಸರ್ಕಾರ’ ಎಂದು ಕರೆಯುತ್ತಿದ್ದಾರೆ. ಆದರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಾಲ ಪಡೆದಿಲ್ಲವೇ? ಎಂದು ಪ್ರಶ್ನಿಸಿದರು.
ಮೋದಿ ಅವರು ದೇಶದ ಪ್ರತಿಯೊಬ್ಬರ ಅಕೌಂಟ್ಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದಿದ್ದರು ಎಲ್ಲಿ ಹಾಕಿದ್ದಾರೆ? ಅಚ್ಚೇ ದಿನ್ ಯಾರಿಗಾದರೂ ಬಂದಿದೆಯೇ? ನಾವು ಕನಿಷ್ಠ ಪಕ್ಷ ಗೃಹಲಕ್ಷ್ಮಿ ಯೋಜನೆಯಡಿ 2,000 ರೂ., ಉಚಿತ ವಿದ್ಯುತ್, ಅಕ್ಕಿ ಮತ್ತು ಬಸ್ ಪ್ರಯಾಣದ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದೇವೆ ಎಂದರು.
ಇನ್ನು ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪನವರಿಗಿಂತ ಹೆಚ್ಚಿನ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
Key words: Central government, failed, control, price hikes, DCM, DK Shivakumar







