Saturday, August 22, 2026

BDA Apartments

Home Front Page ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್: ಜನಪ್ರತಿನಿಧಿಗಳ ಮಾತಿಗೂ ಸ್ಪಂದನೆ ಇಲ್ಲ- ಸಂಸದ ಯದುವೀರ್ ಕಿಡಿ

ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್: ಜನಪ್ರತಿನಿಧಿಗಳ ಮಾತಿಗೂ ಸ್ಪಂದನೆ ಇಲ್ಲ- ಸಂಸದ ಯದುವೀರ್ ಕಿಡಿ

ಮೈಸೂರು,ಏಪ್ರಿಲ್,7,2026 (www.justkannada.in):  ಚಾಮುಂಡಿ ಬೆಟ್ಟದಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಭಾವನೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು  ಚಾಮುಂಡಿ ಬೆಟ್ಟ ಪ್ರಾಧಿಕಾರದ ವಿರುದ್ಧ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದರು.

ಇಂದು ಮಾತನಾಡಿದ ಸಂಸದ ಯದುವೀರ್, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ವಿಚಾರ ನ್ಯಾಯಾಲಯದಲ್ಲಿದೆ. ಚಾಮುಂಡಿ ಬೆಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಯಾರ ಮಾತಿಗೂ ಬೆಲೆ‌ ಕೊಡುತ್ತಿಲ್ಲ. ಈ ಬಗ್ಗೆ ವ್ಯಾಪಕ ದೂರುಗಳು‌ ಕೇಳಿ ಬಂದಿವೆ. ಸ್ಥಳೀಯ ಆಡಳಿತ ಹಾಗೂ ಅಲ್ಲಿನ ನಿವಾಸಿಗಳ ಮಾತಿಗೂ ಪ್ರಾಧಿಕಾರದ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ಸ್ಥಳೀಯ ನಿವಾಸಿಗಳ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದು ಹರಿಹಾಯ್ದರು.

ಮೈಸೂರಿನ ವಿವಿಧೆಡೆಗಳಲ್ಲಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಸದ‌ ಯದುವೀರ್, ಮೈಸೂರಿ ಹಲವೆಡೆ ಎಲ್ಲೆಂದರಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಈ ರೀತಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಲು ಯಾರು ಅನುನತಿ ನೀಡಿದರೋ ಗೊತ್ತಿಲ್ಲ. ಕೆಲವೇ ಮೀಟರ್ ಅಂತರದಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವ ಕಾರಣ ವಾಹ‌ನ ಸವಾರರಿಗೆ ತೊಂದರೆ ಆಗುತ್ತಿದೆ. ರಸ್ತೆಯಲ್ಲಿ ಸಂಚರಿಸಲು ಅನಗತ್ಯವಾಗಿ ವಿಳಂಬ ಆಗುತ್ತಿದೆ. ಸಿಗ್ನಲ್‌ ಲೈಟ್ ಅಳವಡಿಕೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಹೇಳಿದರು.

ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್

ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತಾಗಿದೆ. ಸರ್ಕಾರಿ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾಗಿದೆ. ಆದರೆ ಇಲ್ಲಿ ಅಧಿಕಾರಿಗಳ ದರ್ಬಾರು ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಅಧಿಕಾರಿಗಳು ಕಿವಿಕೊಡುತ್ತಿಲ್ಲ. ಜನಪ್ರತಿನಿಧಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸಂಸದ ಯದುವೀರ್ ಅಸಮಾಧಾನ ವ್ಯಕ್ತಪಡಿಸಿದರು.

Key words: Officers, No response, public, representatives, Mysore MP, Yaduveer