Friday, August 28, 2026

BDA Apartments

Home Front Page ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,10,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಮತದಾನ ನಿನ್ನೆ ಮುಗಿದಿದ್ದು ಈವರೆಗೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಇಂದು ನವದೆಹಲಿಗೆ ತೆರಳಿದ್ದಾರೆ.

ಹೆಚ್ ಎಎಲ್ ಏರ್ ಪೋರ್ಟ್ ನಿಂದ ಸಿಎಂ ಸಿದ್ದರಾಮಯ್ಯ ದೆಹಲಿಗೆ  ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯು ಸಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಸಭೆ ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: CM, Siddaramaiah, Delhi