ಬೆಂಗಳೂರು,ಏಪ್ರಿಲ್,11,2026 (www.justkannada.in): ಹೆಚ್.ಡಿ. ಕುಮಾರಸ್ವಾಮಿ ಅವರು ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದರು.
ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡರು, ಇದು ಕೇವಲ ಗ್ರಾಮ ವಾಸ್ತವ್ಯ ಮಾತ್ರವಲ್ಲ. ರೈತರ ಸಮಸ್ಯೆ ಆಲಿಸಿ, ರೈತರಿಗೆ ಆರ್ಥಿಕ ನೆರವು ಕೊಡುವ ಕೆಲಸ ಮಾಡಿದ್ದಾರೆ ಎಂದರು.
ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಮಹಿಳೆಯರಿಗೆ ಮೊದಲು ಮೀಸಲಾತಿ ನೀಡಿದ್ದು ಕರ್ನಾಟಕ ಸರ್ಕಾರ. ಲೀಲಾವತಿ ಆರ್ ಪ್ರಸಾದ್ ಮೊದಲ ಬಾರಿಗೆ ಸಚಿವರಾಗಿದ್ದರು. ಮುಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲಾ ಪಕ್ಷಗಳು ಇದನ್ನು ಅಳವಡಿಸಿಕೊಳ್ಳಿಎಂದು ದೆಹಲಿಗೆ ಹೋಗಿ ಎಲ್ಲಾ ಪಕ್ಷಗಳಿಗೆ ಮನವಿ ಮಾಡಲಾಗಿತ್ತು. ಅದರ ಫಲವಗಿ 1995-96 ಪ್ರಣಾಳಿಕೆಯಲ್ಲಿ ಮಹಿಳಾ ಮೀಸಲಾತಿ ಅಳವಡಿಕೆ ಮಾಡಲಾಗಿತ್ತು. ಆಗ ಅಟಲ್ ಬಿಹಾರಿ ವಾಜಪೇಯಿ ಅವರು 13 ದಿನ ಪ್ರಧಾನಿ ಆಗಿದ್ದರು ಅದಾದ ನಂತರ ಪಕ್ಷಗಳ ಒಕ್ಕೂಟದಿಂದ ಪ್ರಧಾನಿಯಾಗಿದ್ದೆ ಅಂದಿನ ಸ್ಪೀಕರ್ ಮಹಿಳಾ ಮೀಸಲಾತಿ ಬಗ್ಗೆ ಚರ್ಚೆ ಮಾಡಿದರು. ಬಿಜೆಪಿಯ ಉಮಾಭಾರತಿ ಉತ್ತರ ಪ್ರದೇಶದ ಸಿಎಂ ಆದರು. ಈಗ ಪ್ರಧಾನಿ ಮೋದಿ ಮಹಿಳಾ ಮೀಸಳಾತಿ ಬಗ್ಗೆ ಚರ್ಚಿಸಲು ಮುಂದಾಗಿದ್ದಾರೆ. ಈ ಬಗ್ಗೆ ಚರ್ಚೆಗೆ 3 ದಿನ ವಿಶೇಷ ಅಧಿವೇಶನ ಕರೆದಿದ್ದಾರೆ ಎಂದರು.
Key words: JDS, HDK, model, country, Former PM, HD Deve Gowda







