ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,14,2026 (www.justkannada.in):  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಈ ಬಗ್ಗೆ ವರಿಷ್ಠರೇ ಸ್ಪಷ್ಟನೆ ಕೊಡಬೇಕು ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯಾವ ಕಾರಣಕ್ಕೆ ಯಾವ ಆಧಾರದ ಮೇಲೆ ಆಗಿದೆ ಗೊತ್ತಿಲ್ಲ ವರಿಷ್ಠರೇ ಅದಕ್ಕೆ ಸ್ಪಷ್ಟೀಕರಣ ಕೊಡಬೇಕು.  ಯಾವ ಕಾರಣಕ್ಕೆ ಉಚ್ಚಾಟನೆ ಆಗಿದೆ. ಸರ್ಕಾರ ಸ್ಪಷ್ಟೀಕರಣ ಕೊಡಬೇಕು.  ಅಬ್ದುಲ್ ಜಬ್ಬಾರ್ ರಾಜೀನಾಮೆ ಕೊಟ್ಟಿದ್ದಾರೆ ಆ ಜಾಗಕ್ಕೆ ಮುಸ್ಲೀಮರೇ ಬರಬೇಕು ಬೇರೆಯವರಿಗೆ ಕೊಡಲ್ಲ ಎಂದರು.

ಬೆಳಗಾವಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಟ್ಟಿದ್ದಾರೆ. ಹೆಚ್ಚು ಸಚಿವ ಸ್ಥಾನ ಕೊಡುವುದು ಹೈಕಮಾಂಡ್ ಗೆ ಬಿಟ್ಟಿದ್ದು.  ಮೂರು ಬಾರಿ ಶಾಸಕರಾಗಿ ಆಯ್ಕೆಯಾದವರು ದೆಹಲಿಗೆ ಹೋಗಿದ್ದಾರೆ. ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಬೇಕು  ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: CM’s, political secretary, resigns, Minister, Satish Jarkiholi