ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಏಪ್ರಿಲ್,15,2026 (www.justkannada.in): ಸಚಿವ ಸಂಪುಟ ಪುನಾರಚನೆ ಮಾಡಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲು ಹಿರಿಯ ಶಾಸಕರು ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ  ರಾಮಲಿಂಗರೆಡ್ಡಿ, ಶಾಸಕರು  ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಸಹಜವಾಗಿ ಎಲ್ಲರಿಗೂ ಮಂತ್ರಿಯಾಗುವ ಆಸೆ ಇರುತ್ತದೆ. ಹೊಸಬರಿಗೆ ಅವಕಾಶ ನೀಡಬೇಕು ಅಂದರೆ ಕೆಲವರನ್ನ ಸಂಪುಟದಿಂದ ತೆಗೆಯಬೇಕಾಗುತ್ತದೆ.  ಯಾರನ್ನು ತೆಗೆಯಬೇಕು ಎಂಬುದು ಹೈಕಮಾಂಡ್  ಗೆ ಬಿಟ್ಟಿದ್ದು  ಎಂದರು.

Key words: ministerial position, Minister, Ramalingareddy