ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಸಿಎಂ ಆಗಬೇಕು- MLC ಹೆಚ್.ವಿಶ್ವನಾಥ್

ಮೈಸೂರು,ಏಪ್ರಿಲ್,25,2026 (www.justkannada.in): ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈ ಮಧ್ಯೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪರ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್, ಸಿದ್ದರಾಮಯ್ಯ ಪಕ್ಷ ಕಟ್ಟಿಲ್ಲ ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಹೀಗಾಗಿ  ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಜೆಡಿಎಸ್ ನಿಂದ ಬಂದು ಸಿಎಂ ಆದವರು. ಪಕ್ಷ ಕಟ್ಟಿಲ್ಲ. ಹೀಗಾಗಿ  ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು ಎಂಧು ಹೆಚ್ ವಿಶ್ವನಾಥ್ ತಿಳಿಸಿದರು.

Key words: DK Shivakumar, Congress, become CM, MLC H. Vishwanath