Monday, September 14, 2026

BDA Apartments

Home Front Page ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಆಸ್ಪತ್ರೆಗೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದ್ದಾರೆ.

ಸಚಿವ ಡಿ. ಸುಧಾಕರ್ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಮೊದಲು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾದ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಇಂದು  ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೆ ಮಾಹಿತಿ ಪಡೆದರು. ಸಚಿವರ ಆರೋಗ್ಯದ ಪ್ರಗತಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಗಳ ಬಗ್ಗೆ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಟ್ರಾನ್ಸ್‌ ಪ್ಲಾಂಟ್ ಮಾಡಬೇಕಾದರೇ ಮೆದಳು ಕಾನ್ಸಿಯಸ್ ನಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನ ಮಾಡಲಿದ್ದಾರೆ ಎಂದರು.

Key words: CM Siddaramaiah Visit, KIMS Hospital, Minister, D. Sudhakar’s ,health