ಕೊಪ್ಪಳ,ಏಪ್ರಿಲ್,28,2026 (www.justkannada.in): ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲೆ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಡಳಿತ ಭವನದಲ್ಲಿ ಸಚಿವ ಶಿವರಾಜ್ ತಂಗಡಗಿ ಸಭೆ ನಡೆಸಿ ಚರ್ಚಿಸಿದರು. ಸಂಕನಾಳ ಗ್ರಾಮದ ನೀರಿನ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಅಧಿಕಾರಿಗಳಿಗೆ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದರು. ಅಮೃತ 2 ಯೋಜನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಚಿವ ಶಿವರಾಜ್ ತಂಗಡಗಿ ನನ್ನ ಕ್ಷೇತ್ರದಲ್ಲಿ ಮಾತ್ರ ಕೆಲಸ ಬಹಳ ವಿಳಂಬ ಆಗುತ್ತಿದೆ ಕೇವಲ 27 ಪರ್ಸೆಂಟ್ ಕೆಲಸ ಆಗಿದೆ. ಜಿಲ್ಲೆಯಲ್ಲಿ 30 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇನ್ನೂ ಕೆಲವು ಗ್ರಾಮಗಳಲ್ಲಿ ಸಮಸ್ಯೆ ಆಗಬಹುದು.
ಪ್ರತಿ ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಐದು ವಿಧಾನಸಭಾ ಕ್ಷೇತ್ರಕ್ಕೆ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ನಾಳೇ ಸಭೆ ನಡೆಸಿ ನೀರಿನ ಸಮಸ್ಯೆ ಕುರಿತು ಮಾಹಿತಿ ಪಡೆಯಬೇಕು. ಪ್ರತಿ ತಾಲೂಕಿಗೆ ಸಹಾಯವಾಣಿ ಆರಂಭ ಮಾಡಿದ್ದೇವೆ. ಪ್ರತಿದಿನ ನೀರಿನ ಸಮಸ್ಯೆ ಬಗ್ಗೆ ಡಿಸಿಗೆ ಮಾಹಿತಿ ನೀಢಬೇಕು. ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮಕೈಗೊಳ್ಳಬೇಕು ಎಂದು ಶಿವರಾಜ್ ತಂಗಡಗಿ ಸೂಚನೆ ನೀಡಿದರು.
Key words drinking water, problems,Minister, Shivraj Thangadgi







