Thursday, July 30, 2026

BDA Apartments

Home Front Page ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟವಾಗಿ 10 ದಿನವಾದರೂ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಇನ್ನೂ ಅನರ್ಹಗೊಳಿಸದ ಹಿನ್ನೆಲೆಯಲ್ಲಿ ಸ್ಪೀಕರ್ ಗೆ ಪತ್ರ ಬರೆಯಲಾಗಿದೆ.

ವಿನಯ್ ಕುಲಕರ್ಣಿಯನ್ನು  ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಪತ್ರ ಬರೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಏಪ್ರಿಲ್ 17 ರಂದು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಶಿಕ್ಷೆ ಪ್ರಕಟವಾಗಿ 10 ದಿನಗಳಾದರೂ ವಿನಯ್ ಕುಲಕರ್ಣಿಯನ್ನ ಶಾಸಕ ಸ್ಥಾನದಿಂದ  ಅನರ್ಹಗೊಳಿಸಿಲ್ಲ. ಹೀಗಾಗಿ ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಬಸವರಾಜ ಕೊರವರ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Key words: Letter, Speaker  disqualification, Vinay Kulkarni , MLA, position