ಚಿತ್ರದುರ್ಗ,ಏಪ್ರಿಲ್,30,2026 (www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್ ತಂಗಡಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ. ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಇದನ್ನು ಶಿಸ್ತು ಅಂದುಕೊಳ್ಳಿ ಎಂದರು.
ಇಂದು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಹೈಕಮಾಂಢಡ್ ನಿರ್ಧಾರಕ್ಕೆ ನಾವು ಬದ್ದರಾಗುತ್ತೇವೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ ಶಿಸ್ತು ಅಂದುಕೊಳ್ಳಿ. ಹೈಕಮಾಂಡ್ ಸೂಚನೆ ಪಾಲಿಸುತ್ತೇವೆ ಎಂದು ಸಿಎಂ, ಡಿಸಿಎಂ ಹೇಳಿದ್ದಾರೆ ಎಂದರು.
ಪಕ್ಷದಲ್ಲಿ ಬಿಜೆಪಿಯವರಷ್ಟು ಗೊಂದಲ ನಮ್ಮಲ್ಲಿ ಇಲ್ಲ. ನಮಗೆ ಬುದ್ದಿ ಹೇಳುವಷ್ಟು ಶಿಸ್ತು ಬಿಜೆಪಿಯಲ್ಲಿ ಇಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
Key words: Congress leaders, not, silent, Minister, Shivraj Thangadgi







