ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕೆಂಡ ಕಾರಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರು ಎಲೆಕ್ಷನ್ ಮುಗಿಯುವುದನ್ನೇ ಕಾಯುತ್ತಿದ್ದರು. ಮತದಾನ ಮುಗಿದ ತಕ್ಣವೇ ಬೆಲೆ ಏರಿಕೆ ಮಾಡಿದ್ದಾರೆ. ದೇಶದ ಬಡ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಮುಗಿದ ಕೂಡಲೇ ಬೆಲೆ ಏರಿಕೆಗೆ  ಆದೇಶ ಮಾಡಿದ್ದಾರೆ.  ಬಿಜೆಪಿಯವರು ಎಲ್ಲಾ ಹೋಟೆಲ್ ಗಳನ್ನ ಮುಚ್ಚುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹರಿಹಾಯ್ದರು.

Key words: Gas cylinder, Price hike, DCM, DK Shivakumar