ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ

ಚಿಕ್ಕಮಗಳೂರು,ಮೇ,1,2026 (www.justkannada.in):  ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಐಡಿಎಸ್ ಜಿ ಕಾಲೇಜಿನಲ್ಲಿ ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಮತಗಳ ಮರುಎಣಿಕೆ ನಡೆಯಲಿದೆ.  ಚಲಾವಣೆ ಆಗಿದ್ದ 1822 ಅಂಚೆ ಮತಗಳ ಮರು ಎಣಿಕೆಯಾಗಲಿದ್ದು   ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಾಳೆ ಬೆಳಿಗ್ಗೆ 6 ರಿಂದ ಸಂಜೆ 5ರವರರೆಗೆ ನಿಷೇಧಾಜ್ಞೆ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ ಆದೇಶಿಸಿದ್ದಾರೆ.

ಹಾಗೆಯೇ ಮತ ಎಣಿಕೆ ಕೇಂದ್ರದ 1 ಕಿ.ಮೀ ವ್ಯಾಪ್ತಿಯಲ್ಲಿ ನಾಳೆ ಬೆಳಿಗ್ಗೆ 6ರಿಂದ ರಾತ್ರಿ 11ರವರೆಗೆ  ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಈ ಮಧ್ಯೆ  ಬಿಜೆಪಿ ಅಭ್ಯರ್ಥಿ ಜೀವರಾಜ್ ವಿರುದ್ದ 201 ಮತಗಳ ಅಂತರದಿಂದ ಜಯ ಸಾಧಿಸಿದ್ದರು.  ಹೀಗಾಗಿ ಜೀವರಾಜ್ ಅಂಚೆ ಮತಗಳ ಮರುಎಣಿಕೆಗೆ ಕೋರ್ಟ್ ಮೊರೆ ಹೋಗಿದ್ದರು. ಅಂಚೆ ಮತ ಮರು ಎಣಿಕೆ ಹೈಕೋರ್ಟ್ ಮಾಡುವಂತೆ ಆದೇಶ ನೀಡಿತ್ತು.  ಹೈಕೋರ್ಟ್ ಆದೇಶ ಬೆನ್ನಲ್ಲೆ ಇದೀಗ ಅಂಚೆ ಮತಗಳ ಮರು ಎಣಿಕೆಗೆ ಚುನಾವಣಾ ಆಯೋಗ ಸಿದ್ದತೆ ನಡೆಸಿದೆ.

Key words: Recount, postal votes, Sringeri constituency, tomorrow