ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು: ತೊಂದರೆ ಸರಿಪಡಿಸುವ ಕೆಲಸ ಮಾಡ್ತೇವೆ-ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,5,2026 (www.justkannada.in): ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ಅಲ್ಪಸಂಖ್ಯಾತರ ತೊಂದರೆ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ದಾವಣಗೆರೆಯಲ್ಲಿ ಕಡಿಮೆ ಅಂತದಲ್ಲಿ ಗೆದ್ದಿದ್ದೇವೆ. ಆದರೆ ನಮಗೆ ಎಲ್ಲಾ ಮತಗಳು ನಿರ್ಣಾಯಕ. ಉಪಚುನಾವಣೆಯ ಸಂದರ್ಭದಲ್ಲಿ ಕೆಲ ಗೊಂದಲ ಸೃಷ್ಠಿಯಾಗಿತ್ತು.

ಮುಂದಿನ ದಿನಗಳಲ್ಲಿ ಈ ರೀತಿ ಆಗುವುದಿಲ್ಲ ಅಲ್ಪಸಂಖ್ಯಾತರಲ್ಲಿನ ತೊಂದರೆ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words: victory, Davangere, problem, Minister, Dinesh Gundu Rao