BSY ಅಭಿಮಾನೋತ್ಸವ: 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ- ಗೋವಿಂದ ಕಾರಜೋಳ

ಚಿತ್ರದುರ್ಗ,ಮೇ,8,2026 (www.justkannada.in): ಬಿಎಸ್ ಯಡಿಯೂರಪ್ಪ ರಾಜಕೀಯಕ್ಕೆ ಬಂದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾಳೆ ಚಿತ್ರದುರ್ಗದಲ್ಲಿ ಬಿಎಸ್ ವೈ ಅಭಿಮಾನೋತ್ಸವ ಆಯೋಜಿಸಲಾಗಿದೆ.

ಈ ಕುರಿತು ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಅಭಿಮಾನೋತ್ಸವಕ್ಕೆ ಎಲ್ಲಾ ಸಿದ್ದತೆ ಪೂರ್ಣಗೊಂಡಿದೆ. 10ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. 1 ಸಾವಿರಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಲಿದ್ದಾರೆ ಎಂದರು.

ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುತ್ತಾರೆ. ಸಭಿಕರಿಗೆ ಸಮಸ್ಯೆ ಆಗದಂತೆ ನೀರು ಉಪಹಾರ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

Key words: BSY Abhimanotsav, 10 lakh people, MP, Govinda Karajol