ನೀಟ್ ಪರೀಕ್ಷೆ ರದ್ದು ಆಘಾತ ತಂದಿದೆ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಮೇ,12,2026 (www.justkannada.in):  ಪ್ರಶ್ನೆ ಪತ್ರಿಕೆ ಸೋರಿಕೆಯಾದ ಗಂಭೀರ್ ಆರೋಪ ಹಿನ್ನೆಲೆಯಲ್ಲಿ ನೀಟ್-ಯುಜಿ ಪರೀಕ್ಷೆ ರದ್ದಾಗಿರುವುದಕ್ಕೆ  ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಸಿ ಸುಧಾಕರ್,  ನೀಟ್ ಪರೀಕ್ಷೆ ರದ್ದಾಗಿರುವುದರಿಂದ ಆಘಾತವಾಗಿದೆ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಕೇಂದ್ರದ ಬಿಜೆಪಿ ನಾಯಕರು ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಮೇ 3 ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ರಾಜಸ್ತಾನದಲ್ಲಿ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆಯನ್ನ ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು ಸಿಬಿಐ ತನಿಖೆಗೆ ವಹಿಸಿದೆ. ಮರುಪರೀಕ್ಷೆಗೆ ಶೀಘ್ರವೇ ದಿನಾಂಕ ಘೋಷಣೆ ಮಾಡಲಿದೆ.

Key words: Cancellation, NEET exam, shock, Minister, M.C. Sudhakar