Wednesday, August 12, 2026

BDA Apartments

Home Front Page ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ

ಮೀಸಲಾತಿ ಹೆಚ್ಚಳ ಶೆಡ್ಯೂಲ್ 9ಗೆ ಸೇರಿಸಲು ಒತ್ತಡ: ಸರ್ವಪಕ್ಷ ನಿಯೋಗಕ್ಕೆ  ಸಿಎಂ ಸಿದ್ದರಾಮಯ್ಯ ಸಹಮತ

ಬೆಂಗಳೂರು,ಮೇ,12,2026 (www.justkannada.in):   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ  ಶೆಡ್ಯೂಲ್ 9ಗೆ ಸೇರಿಸುವಂತೆ ಒತ್ತಡ ಹೇರಳು ಪ್ರಧಾನಿ ಬಳಿಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು.

ಕರ್ನಾಟಕ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅವರ ನೇತೃತ್ವದ ನಿಯೋಗದ ಜೊತೆಗೆ ಸಭೆ ನಡೆಸಿದ  ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶೇ. 56 ಮೀಸಲಾತಿ ಹೆಚ್ಚಳದ ವಿಚಾರಕ್ಕೆ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಇದೇ ವೇಳೆ ಮಾತನಾಡಿದ ವಿ.ಎಸ್ ಉಗ್ರಪ್ಪ   ಪರಿಶಿಷ್ಟ ಜಾತಿಗೆ ಶೇ. 17% ಪರಿಶಿಷ್ಟ ಪಂಗಡಕ್ಕೆ ಶೇ.7% ಮೀಸಲಾತಿ ಹೆಚ್ಚಳ ಮಾಡಲಾಗಿದೆ‌. ಆದರೆ ಇದನ್ನು ಶೆಡ್ಯೂಲ್ 9 ಗೆ ಸೇರಿಸಿಲ್ಲ. ಇದರಿಂದ ಎಸ್ಸಿ ಎಸ್ಟಿ ಸಮಯದಾಯಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ತಕ್ಷಣ ಸರ್ವಪಕ್ಷ ನಿಯೋಗವನ್ನು  ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿಸಿದ ಸಚಿವರ ಬಳಿ ಕರೆದೊಯ್ದು ಒತ್ತಡ ಹೇರಬೇಕು. ಹೈಕೋರ್ಟ್ ನಲ್ಲಿ ತಡೆಯಾಜ್ಞೆತೆರವುಗೊಳಿಸಲು ಸಮರ್ಥ ವಕೀಲರ ನೇಮಕ ಮಾಡಬೇಕು. ಒಂದು ವೇಳೆ ತಡೆಯಾಜ್ಞೆ ತೆರವಾಗದಿದ್ದರೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿ ಈ ವಿಚಾರವಾಗಿ ತಳ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರಿಗೆ ಹಾಗೂ ನೀಡುವವರಿಗೆ ಶಿಕ್ಷೆಯಾಗಬೇಕು ಎಂದು ಉಗ್ರಪ್ಪ ಮನವಿ ಮಾಡಿದರು.

ವಿಎಸ್ ಉಗ್ರಪ್ಪ ಮನವಿಗೆ ಸ್ಪಂದಿಸಿದ  ಸಿಎಂ ಸಿದ್ದರಾಮಯ್ಯ ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಯ ಗೊಂದಲ ಬಗೆಹರಿಸಲು ಜನಪ್ರತಿನಿಧಿಗಳ ಸಭೆ ಕರೆದು ತಕ್ಷಣ ಪ್ರಧಾನಿ ಹಾಗೂ ಕೇಂದ್ರ ಪರಿಶಿಷ್ಟ ಪಂಗಡ ಇಲಾಖೆ ಸಚಿವರನ್ನು ಭೇಟಿ ಮಾಡಲಾಗುವುದು. ಮೀಸಲಾತಿ ಹೆಚ್ಚಳ ವಿಚಾರವನ್ನು ಶೆಡ್ಯೂಲ್ 9 ಗೆ ಸೇರಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಒತ್ತಡ ಹೇರೋಣ, ಕೇವಲ ಪತ್ರ ವ್ಯವಹಾರದಿಂದ ಈ ಸಮಸ್ಯೆ ಬಗೆಹರಿಯಲ್ಲ ಎಂದು ನಿಯೋಗಕ್ಕೆ ತಿಳಿಸಿದರು.

ನಿಯೋಗದಲ್ಲಿ ಸಂಜಯ್ ಕುಮಾರ್ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ, ಈಶ್ವರಾನಂದ ಸ್ವಾಮೀಜಿ, ಪ್ರಕಾಶ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಸಮಾನ ಮನಸ್ಕರ ವೇದಿಕೆ ಖಜಾಂಚಿ ಈ ರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.

Key words: reservation, increase,Schedule 9,  CM Siddaramaiah, all-party delegation