Thursday, August 13, 2026

BDA Apartments

Home Cinema ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಇಂದು ನೆರವೇರಿತು.

ರಾಮನಗರ ಜಿಲ್ಲೆ ಗುನ್ನೂರು ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ನಲ್ಲಿ ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ನೆರವೇರಿತು. ದಿಲೀಪ್ ರಾಜ್ ಅಣ್ಣನ ಮಗ ಆರ್ಯನ್  ಅಂತಿಮ ವಿಧಿವಿಧಾನ ನೆರವೇರಿಸಿದ್ದು ರಾಜಶೇಖರ ಶಿವಾಚಾರ್ಯ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಯಿತು.

ಅಂತ್ಯಕ್ರಿಯೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ನಟ ನಟಿಯರು ಭಾಗಿಯಾಗಿ ನಟ ದಿಲೀಪ್ ರಾಜ್ ಗೆ ಕಣ್ಣೀರಿನ ವಿದಾಯ ಹೇಳಿದರು.

Key words: funeral, actor, director, Dilip Raj, passed away