ತುಮಕೂರು,ಮೇ,19,2026 (www.justkannada.in): ನಾವು ಕರ್ನಾಟಕದಲ್ಲಿ ಜನಸ್ನೇಹಿ ಸರ್ಕಾರವನ್ನ ನೀಡುತ್ತಿದ್ದೇವೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನುಡಿದರು.
ಇಂದು ತುಮಕೂರಿನ ಜೂನಿಯರ್ ಕಾಲೇಜು ಅವರಣದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ 3 ವರ್ಷ ಸಾರ್ಥಕತೆಯ ಸರ್ಕಾರವನ್ನು ನೀಡಿದ್ದೇವೆ. ಚುನಾವಣೆ ಪೂರ್ವದಲ್ಲಿ ಕೊಟ್ಟಿದ್ದ ಭರವಸೆ ಈಡೇರಿಸಿದ್ದೇವೆ. ಸಮಾಜದ ಕಟ್ಟ ಕಡೆಯ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳಿಗೆ 60 ಸಾವಿರ ಕೋಟಿ ಅನುದಾನ ನೀಡಲಾಗುತ್ತಿದೆ. ಗೃಹ ಲಕ್ಷ್ಮೀ ಯೋಜನೆಗೆ ಪ್ರತಿವರ್ಷ 28 ಸಾವಿರ ಕೋಟಿ ಖರ್ಚಾಗುತ್ತಿದೆ. ಮಹಿಳೆಯರು ರಾಜ್ಯದಲ್ಲಿ ಆರ್ಥಿಕವಾಗಿ ಸಬಲೀಕರಣ ಆಗುತ್ತಿದ್ದಾರೆ. ವಿರೋಧ ಪಕ್ಷದವರು ವಿರೋಧಕ್ಕಾಗಿ ಟೀಕೆ ಮಾಡುತ್ತಾರೆ ಎಂದರು.
Key words: Tumkur, Sadhana Conference, Minister, Lakshmi Hebbalkar.







