ಬೆಂಗಳೂರು,ಮೇ,25,2026 (www.justkannada.in): ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿದ್ದಾರೆ.
ಧಾರವಾಡ ಶಾಸಕರ ನಿಯೋಗದ ಜೊತೆ ಸಚಿವ ಸಂತೋಷ್ ಲಾಡ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿದ್ದಾರೆ. ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಬಿಲ್ ವಿಚಾರವಾಗಿ ಸ್ಪಷ್ಟನೆ ನೀಡಲು ಭೇಟಿ ನೀಡಲಾಗಿದೆ ಎನ್ನಲಾಗಿದೆ
ಈಗಾಗಲೇ ಬಿಲ್ ಪಾಸ್ ಆಗಿ ರಾಜ್ಯಪಾಲರ ಅಂಕಿತಕ್ಕೆ ಹೋಗಿದೆ. ಆದರೆ ರಾಜ್ಯಪಾಲರು ವಿಧೇಯಕಕ್ಕೆ ಅಂಕಿತ ಹಾಕದೆ ಕೆಲ ಸ್ಪಷ್ಟನೆ ಕೇಳಿದ್ದಾರೆ. ಹೀಗಾಗಿ ರಾಜ್ಯಪಾಲರಿಗೆ ಸ್ಪಷ್ಟನೆ ನೀಡಲು ಸಚಿವ ಸಂತೋಷ್ ಲಾಡ್ ನೇತೃತ್ವದ ನಿಯೋಗ ಭೇಟಿಯಾಗಿದೆ.
Key words: Minister, Santosh Lad, meets, Governor







