ನಟ ದರ್ಶನ್ ಆತ್ಮಹತ್ಯೆಗೆ ಯತ್ನ ವದಂತಿ ಬಗ್ಗೆ ಸ್ಪಷ್ಟನೆ ಕೊಟ್ಟ ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,23,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ  ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್,  ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬುದು ಸಂಪೂರ್ಣ ಸುಳ್ಳು.  ಜೈಲಿನಲ್ಲಿ ಆ ರೀತಿ ಘಟನೆ ನಡೆದಿಲ್ಲ ಅಂತಾ ಮಾಹಿತಿ ಬಂದಿದೆ.  ಜೈಲಿನ ಅಧಿಕಾರಿಗಳು ಮೌಖಿಕ ಮಾಹಿತಿ ನೀಡಿದ್ದಾರೆ ಎಂದರು.

ಆ ರೀತಿಯ ಘಟನೆ ನಡೆದಿಲ್ಲ ಅಂತಾ ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳಿಂದ ಮೌಖಿಕವಾಗಿ ಕೇಳಿದ್ದೇನೆ ಎಂದರು.

Key words: Home Minister, Parameshwar, clarifies, rumours, actor, Darshan