ಬೆಂಗಳೂರು,ಮೇ,23,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್, ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬುದು ಸಂಪೂರ್ಣ ಸುಳ್ಳು. ಜೈಲಿನಲ್ಲಿ ಆ ರೀತಿ ಘಟನೆ ನಡೆದಿಲ್ಲ ಅಂತಾ ಮಾಹಿತಿ ಬಂದಿದೆ. ಜೈಲಿನ ಅಧಿಕಾರಿಗಳು ಮೌಖಿಕ ಮಾಹಿತಿ ನೀಡಿದ್ದಾರೆ ಎಂದರು.
ಆ ರೀತಿಯ ಘಟನೆ ನಡೆದಿಲ್ಲ ಅಂತಾ ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳಿಂದ ಮೌಖಿಕವಾಗಿ ಕೇಳಿದ್ದೇನೆ ಎಂದರು.
Key words: Home Minister, Parameshwar, clarifies, rumours, actor, Darshan







