ರಾಹುಲ್ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ- ಸಚಿವ ಹೆಚ್. ಕೆ ಪಾಟೀಲ್

ಬೆಂಗಳೂರು,ಮೇ,28,2026 (www.justkannada.in):   ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ  ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಇಂದು ಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಚ್.ಕೆ ಪಾಟೀಲ್  ಅವರು  ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ವಿಚಾರ ಕುರಿತು ಬಹಿರಂಗಪಡಿಸಿದರು.

ಸಿದ್ದರಾಮಯ್ಯ  3 ಗಂಟೆಗೆ ರಾಜೀನಾಮೆ ನೀಡುತ್ತಾರೆ.  ರಾಜೀನಾಮೆ ನೀಡುವುದಕ್ಕೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ರಾಹುಲ್ ಗಾಂಧಿ ಸಲಹೆಯಂತೆ ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು.

Key words:  CM Siddaramaiah, will, resign, Minister, H. K Patil