ಜೂ.3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ಬೆಂಗಳೂರು,ಮೇ,30,2026 (www.justkannada.in):  ಜೂನ್ 3 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಮಾಣ ವಚನದ ಬಗ್ಗೆ ಮಾಹಿತಿ ನೀಡಿದ ಜೆಸಿ ಚಂದ್ರಶೇಖರ್, ಜೂ‍ನ್ 3 ರಂದು ಲೋಕಭವನದ ಗಾಜಿನಮನೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಲೋಕಭವನದಲ್ಲಿ ಪದಗ್ರಹಣ ಸಮಾರಂಭ ನಡೆಸಲು ನಿರ್ಧಾರ  ಮಾಡಲಾಗಿದೆ ಎಂದರು.

ಯಾವುದೇ ಪಾಸ್ ಗಳನ್ನ ನಾವು ಮಾಡಿಸಲ್ಲ  ತುಂಬಾ ಸರಳವಾಗಿ ಸಮಾರಂಭ ಮಾಡಲು ತೀರ್ಮಾನಿಸಲಾಗಿದೆ.  ಯಾವ ಅಭಿಮಾನಿಗಳು ಬೆಂಗಳೂರಿಗೆ ಬರಬಾರದು ಪೆಟ್ರೋಲ್,  ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಯಾರೂ ಬರದಂತೆ ಮನವಿ ಮಾಡುತ್ತೇವೆ ಎಂದರು.

Key words: DK Shivakumar, take, oath,  new CM, June 3