ಬೆಂಗಳೂರು,ಜೂನ್,3,2026 (www.justkannada.in): ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. 
ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಬಿಎಸ್ ಯಡಿಯೂರಪ್ಪರಿಗೆ ಆಹ್ವಾನ ನೀಡಿದರು.
ಇದಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಡಿಕೆ ಶಿವಕುಮಾರ್ ಧನ್ಯವಾದ ಅರ್ಪಿಸಿದರು.
ಇಂದು ಸಂಜೆ 4.05 ಲೋಕಭವನದ ಗಾಜಿನ ಮನೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು 13 ಮಂದಿ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. 
Key words: Former CM, BS Yeddyurappa, DK Shivakumar, invites






