2ನೇ ಪಟ್ಟಿಯಲ್ಲಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ- ಸಂತೋಷ್ ಲಾಡ್

ಬೆಂಗಳೂರು,ಜೂನ್,4,2026 (www.justkannada.in):  ನನಗೆ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು  ಮಾಜಿ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಸಚಿವ ಸ್ಥಾನ ಕೈತಪ್ಪಿದ ವಿಚಾರ ಕುರಿತು ಮಾತನಾಡಿದ ಸಂತೋಷ್ ಲಾಡ್,  ನನಗೆ ಸಚಿವ ಸ್ತಾನ ನೀಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ.  ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಮೊದಲ ಪಟ್ಟಿಯಲ್ಲಿ ಬರದಿದ್ದರೂ ಪರವಾಗಿಲ್ಲ . 2ನೇ ಪಟ್ಟಿಯಲ್ಲಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.

ಬಿಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ,. ಬಿ.ಕೆ ಹರಿಪ್ರಸಾದ್ ಅವರಿಗೆ  ಅಭಿನಂದನೆ ಸಲ್ಲಿಸುತ್ತೇನೆ ನನ್ನ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದು ಖುಷಿಯಾಯಿತು  ಎಂದು ಸಂತೋಷ್ ಲಾಡ್ ತಿಳಿಸಿದರು.

Key words: confident, ministerial post, 2nd list, Santosh Lad