Wednesday, September 9, 2026

BDA Apartments

Home Front Page ಯಾವ್ ಟ್ರಬಲ್ ಶೂಟರ್ ರೀ..? ಸಿಎಂ ಡಿಕೆಶಿಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಟಾಂಗ್

ಯಾವ್ ಟ್ರಬಲ್ ಶೂಟರ್ ರೀ..? ಸಿಎಂ ಡಿಕೆಶಿಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಟಾಂಗ್

ತುಮಕೂರು,ಜೂನ್,5,2026 (www.justkannada.in):  ಖಾತೆ ಹಂಚಿಕೆ ಬಳಿಕ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ ವಿಚಾರ  ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಪ್ರತಿಕ್ರಿಯಿಸಿದ್ದು, ಇದೇ ವೇಳೆ  ಸಿಎಂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟಿದ್ದಾರೆ.

ಯಾವ್ ಟ್ರಬಲ್ ಶೂಟರ್ ರೀ… ನೀವೇ ಟ್ರಬಲ್ ಶೂಟರ್ ಮಾಡಿರೋದು. ಹಾಗಿದ್ದ ಮೇಲೆ ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ ಎಂದು ಮಾಧ್ಯಮಗಳ ಜೊತೆ ಮಾತನಾಡುವ ವೇಳೆ ಸಿಎಂ ಡಿ.ಕೆ.ಶಿವಕುಮಾರ್ ಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಕೌಂಟರ್ ನೀಡಿದರು.

ರಾಮಲಿಂಗಾ ರೆಡ್ಡಿ  ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ ಕೆ.ಎನ್ ರಾಜಣ್ಣ,  ಹೌದಾ.. ಹೊಸ ಸುದ್ದಿ ಹೇಳ್ತಿರಾ ಅಂದಕೊಂಡರೆ ಹಳೆ ಸುದ್ದಿ ಹೇಳ್ತಿರಲ್ಲ. ಇದು ಯಾವುದೇ ಪತನ ಅಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ. ಹಾಗೆಯೇ ರಾಮಲಿಂಗಾ ರೆಡ್ಡಿಯವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಾಗೂ ಶಾಸಕರಾಗಿ ತಮ್ಮ ಜವಾಬ್ದಾರಿಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ ಎಂದು ಕೆ ಎನ್‌ ರಾಜಣ್ಣ  ತಿಳಿಸಿದರು.

ಈಶ್ವರ ಖಂಡ್ರೆ ಅವರಿಗೆ ಅದೇ ಅರಣ್ಯ ಖಾತೆ ಯಾಕೆ ಕೊಡಲಿಲ್ಲ? ಪರಮೇಶ್ವರ್ ಅವರಿಗೆ ಗೃಹ ಖಾತೆ ನೀಡಬೇಕಿತ್ತು. ಯಾಕೆ ಕಂದಾಯ ಖಾತೆ ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು.

Key words: trouble shooter, CM DK Shivakumar, Former Minister, K.N. Rajanna