ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ. ಆದರೆ ಒಬ್ಬರಿಗೆ ಒಂದು ಸ್ಥಾನ ಕಾರಣಕ್ಕೆ ಅಧ್ಯಕ್ಷನಾಗಲಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಇಸ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇತ್ತು. ನನ್ನ ಕುರಿತು ಸುಳ್ಳು ಸುದ್ದಿ ಹರಡಿಸಿದ್ದು ಮುಗಿದ ಅಧ್ಯಾಯ. ಸುಳ್ಳುಸುದ್ದಿಗೆ ತಂದೆ ತಾಯಿ ಯಾರೂ ಇಲ್ಲ. ಸುಳ್ಳು ಸುದ್ದಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುವುದು ಬೇಡ ಎಂದರು.
ಹಿರಿಯರು ಅನುಭವಸ್ಥರಾಗಿರುವ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆ. ನಾವು ಹರಿ ಪ್ರಸಾದ್ ನೇತೃತ್ವದಲ್ಲಿ ಸಾಗುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
Key words: demand, post, KPCC president, Minister, Satish Jarkiholi






