ಶಿವಮೊಗ್ಗ,ಜೂನ್,9,2026 (www.justkannada.in): ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಸಚಿವ ಸ್ಥಾನದ 2ನೇ ಪಟ್ಟಿಯಲ್ಲಿ ಬೇಡಿಕೆ ಇದ್ದೇ ಇರುತ್ತದೆ. ಸಚಿವ ಸ್ಥಾನ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರ್ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ವರಿಷ್ಠರಿಗೆ ಗೊತ್ತಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ದವಾಗಿ ಇರುತ್ತೇವೆ. ರಾಜ್ಯಸಭೆ ಎಂಎಲ್ ಸಿ ಚುನಾವಣೆ ಬಳಿಕ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಸಿಎಂ ಬಳಿಯೇ ಶಿಕ್ಷಣ ಖಾತೆ ಇದೆ. ಸಿಎಂ ಬಳಿ ಈ ಖಾತೆ ಇರುವುದರಿಂದ ಇಲಾಖೆ ಚೆನ್ನಾಗಿ ನಡೆಯುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ನೀಡದೇ ಬಿಜೆಪಿ ಮೋಸ ಮಾಡ ಆಗಿದೆ. ಇದು ಬಿಜೆಪಿಯವರ ಚಾಳಿಯಾಗಿದೆ ಎಂದು ಮಧು ಬಂಗಾರಪ್ಪ ಕುಟುಕಿದರು.
Key words: High Command, decision, ministerial post, Madhu Bangarappa






