ಮೈಸೂರು,ಜೂನ್ 10,2026 (www.justkannada.in): ಕಾರ್ಮಿಕರೊಬ್ಬರು ಡೆತ್ ನೋಟ್ ಬರೆದಿಟ್ಟು ಕಾರ್ಕಾನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡಿನ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಕಪ್ಪಸೋಗೆ ಗ್ರಾಮದ ಕುಮಾರಸ್ವಾಮಿ (45) ಆತ್ಮಹತ್ಯೆಗೆ ಶರಣಾದ ಕಾರ್ಮಿಕ. ಡೆತ್ ನೋಟ್ ಬರೆದಿಟ್ಟು ಕುಮಾರಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಖಾನೆ ಸಹದ್ಯೋಗಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ವಿದ್ಯಾಶ್ರೀ ರಾಘವೇಂದ್ರ, ದಿನೇಶ್ ವಿರುದ್ದ ಆರೋಪ ಮಾಡಿದ್ದು, ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Key words: Mysore, Worker, commits suicide, factory






