Sunday, August 9, 2026

BDA Apartments

Home Crime ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಉತ್ತರ ಕನ್ನಡ,ಜೂನ್,23,2026 (www.justkannada.in): ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಎರಡು ಕಚೇರಿಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿದ್ದು ಈ ವೇಳೆ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುವ ವೇಳೆ ಸಿಕ್ಕಿ ಬಿದ್ದಿದ್ದಾರೆ.

ಹೆಸ್ಕಾಂ ಇಂಜಿನಿಯರ್ ಧರ್ಮರಾಜ್  ಬೆಡಸಂಗಾವ್,  ಕಂದಾಯ ನಿರೀಕ್ಷಕ ಬಸವರಾಜ್ ಲೋಕಾಯುಕ್ತ ಬಲೆಗೆ  ಬಿದ್ದವರು.  ಗುತ್ತಿಗೆದಾರ ಶಿವಯೋಗಿ ಕೂಡಲಮಠ ಎಂಬುವವರಿಂದ ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ.

65 ಸಾವಿರ ರೂ.  ಲಂಚ ಸ್ವೀಕರಿಸುತ್ತಿದ್ದ ಧರ್ಮರಾಜ್  ಹಾಗೂ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಸವರಾಜ್  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Key words: Lokayukta, two officials, accepting, bribe