Wednesday, August 12, 2026

BDA Apartments

Home Front Page ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ವರ್ಷಕ್ಕೊಂದು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜೃಂಭಣೆಯಿಂದ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು,  ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಅಥವಾ ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸದೆ, ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಗುವುದು. ಈ ವರ್ಷ ಯಶವಂತಪುರ ಕ್ಷೇತ್ರದ ಕೆಂಪೇಗೌಡ ಲೇಔಟ್‌ ನಲ್ಲಿ ಜಯಂತಿ ಆಚರಣೆ ಪ್ರಾರಂಭವಾಗಿದ್ದು, ಮುಂದಿನ 28 ವರ್ಷಗಳ ಕಾಲ ಬೇರೆ ಬೇರೆ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಮುಂದುವರೆಯಲಿದೆ. ಜಿಬಿಎ ವತಿಯಿಂದ ಇದಕ್ಕೆ ಹಣಕಾಸಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಟ್ರಂಪೆಟ್ ಸರ್ಕಲ್ ಬಳಿ ಕೆಂಪೇಗೌಡರ ಗುರುತನ್ನು ಪ್ರತಿಬಿಂಬಿಸುವ ಮತ್ತೊಂದು ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ. ಕೆಂಪೇಗೌಡರ ಆಚಾರ-ವಿಚಾರಗಳನ್ನು ಅಳವಡಿಸಿಕೊಂಡು ಬೆಂಗಳೂರಿಗೆ ಹೊಸ ರೂಪ ನೀಡುವ ಚಿಂತನೆ ಇದೆ ಎಂದು  ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: Kempegowda Jayanti, Bengaluru, every year, CM, DK Shivakumar