ಬೆಂಗಳೂರು,ಜುಲೈ,2,2026 (www.justkannada.in): 52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಗಿರೀಶ್ ಭಾರಧ್ವಜ್ ಎಂಬುವವರು ಪಿಐಎಲ್ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರದ ಕ್ರಮಕ್ಕೆ ಮಧ್ಯಂತರ ತಡೆ ನೀಡಿದೆ.
ಯುಟಿ ಖಾದರ್ ಅವರ ಶಿಪಾರಸು ಮೇರೆಗೆ ಕೆಲ ಪ್ರಕರಣ ಹಿಂಪಡೆಯಲಾಗಿತ್ತು . ಕಲಬುರಗಿ ಲಾಡ್ಲೆ ಮಶಾಕ್ ದರ್ಗಾ ಗಲಭೇ ಕೇಸ್, ಕೋಮು ಗಲಭೆ ಕೇಸ್ ಗಳೂ ಸೇರಿ 52 ಪ್ರಕರಣ ವಾಪಸಾತಿಗೆ ನಿರ್ಧರಿಸಲಾಗಿತ್ತು. 
ಇದೀಗ 2026ರ ಮೇ 27 ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ ತಡೆ ನೀಡಿದೆ. ಕೋಮುಗಲಭೆ ಆರೋಪಿಗಳ ಪರ ಯು. ಟಿ ಖಾದರ್ ಶೀಪಾರಸು ಆರೋಪ ಸಂಬಂಧ ಖಾದರ ಅವರಿಗೆ ನೋಟಿಸ್ ನೀಡಲು ಹೈಕೋರ್ಟ್ ನಿರಾಕರಿಸಿದೆ. ಗೃಹ ಇಲಾಖೆ ಅಭಿಯೋಜನೆ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ.
Key words: High Court, stays, government, withdraw, 52 criminal cases






