ಶಿವಮೊಗ್ಗ,ಜುಲೈ,9,2026 (www.justkannada.in): ವಿದ್ಯುತ್ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರದಿಂದ ಒತ್ತಡ ಇದೆ. ಆದರೆ ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಆಗಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.
ಬೇಸೂರು ಗ್ರಾಂದಲ್ಲಿ ಅಣುವಿದ್ಯುತ್ ಯೋಜನೆ ವಿಚಾರ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಯೋಜನೆ ಮಾಡುವುದಿಲ್ಲ. ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ವಿದ್ಯುತ್ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರದಿಂದ ಒತ್ತಡ ಇದೆ. ಆದರೆ ರಾಜ್ಯ ಸರ್ಕಾರ ವಿದ್ಯುತ್ ಖಾಸಗೀಕರಣ ಮಾಡಲ್ಲ ಎಂದು ತಿಳಿಸಿದರು.
ಇನ್ನು ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಜನರಿಗೆ ನೆಮ್ಮದಿ ಸಿಕ್ಕಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
Key words: no privatization, electricity, MLA, Belur Gopalakrishna







