Sunday, August 23, 2026

BDA Apartments

Home Front Page ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಬೆಂಗಳೂರು ಸಿಟಿ ರೌಂಡ್ಸ್ ಸಾಧ್ಯತೆ

ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಬೆಂಗಳೂರು ಸಿಟಿ ರೌಂಡ್ಸ್ ಸಾಧ್ಯತೆ

ಬೆಂಗಳೂರು,ಜುಲೈ,9,2026 (www.justkannada.in): ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ಹಾಕುವ ಸಾಧ್ಯತೆ ಇದೆ.

ನಾಳೆ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್  ಹಾಕಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೀಕ್ಷಿಸಲಿದ್ದಾರೆ.  ಈಗಾಗಲೇ 430 ಕಿ.ಮೀ ಗೂ ಹೆಚ್ಚು ಫುಟ್ ಪಾತ್ ಒತ್ತುವರಿ ತೆರವು ಮಾಡಲಾಗಿದೆ.

ಜಿಬಿಎ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು ಜುಲೈ1ರಿಂದ ಆರಂಭವಾಗಿದೆ. ಆದರೆ ಫುಟ್ ಪಾತ್ ಒತ್ತುವರಿ ತೆರವಿಗೆ ಬೀದಿಬದಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದ್ದು ಇಂದು  ಸಿಎಂ ಡಿಕೆ ಶಿವಕುಮಾರ್ ಗೆ ಒಕ್ಕೂ ಮನವಿ ಪತ್ರ ಸಲ್ಲಿಸಿದೆ. ಹೀಗಾಗಿ ನಾಳೇ  ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್ ಹಾಕುವ ಸಾಧ್ಯತೆ ಇದೆ.

Key words: CM, DK Shivakumar, Bengaluru, city rounds, tomorrow