ರಾಮನಗರ,ಜುಲೈ14,2026 (www.justkannada.in): ಬಿಡದಿ ಟೌನ್ ಶಿಪ್ ಸರ್ವೇಗಾಗಿ ತೆರಳಿದ್ದ ಅಧಿಕಾರಿಗಳಿಗೆ ಪೊರಕೆ ಸೇವೆ ಮಾಡಿ ಕಾರಿಗೆ ಕಲ್ಲಿನಿಂದ ಹೊಡೆದು ಗಲಾಟೆ ಮಾಡಿದ ಸಂಬಂಧ ಮೂವರು ಮಹಿಳೆಯರು ಸೇರಿ 10ಕ್ಕೂ ಹೆಚ್ಚು ರೈತರ ವಿರುದ್ದ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ವೇ ಮಾಡಲು ಬಂದಿದ್ದ ಅಧಿಕಾರಿಳಿಗೆ ಪೊರಕೆ ಸೇವೆ ಮಾಡಿದ್ದ ಜಯಮ್ಮ, ಭಾಗ್ಯ, ವರಲಕ್ಷ್ಮಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಮುರುಳಿ ಕೊಟ್ಟ ದೂರಿನ ಮೇಲೆ 10ಕ್ಕೂ ಹೆಚ್ಚು ರೈತರ ಮೇಲೆ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಜೀವಬೆದರಿಕೆ ಹಾಕಿ ರೈತರಿಂದ ಹಲ್ಲೆ ಎಂದು ಪ್ರಕರಣ ದಾಖಲಾಗಿದೆ. ನಿನ್ನೆ ರಾಮನಗರದ ಮಂಡಲಹಳ್ಳಿಯಲ್ಲಿ ರೈತರು ಮಹಿಳೆಯರು ಸರ್ವೇ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಕಾರಿಗೆ ಪೊರಕೆಯಿಂದ ಹೊಡೆದಿದ್ದರು. ಅಲ್ಲದೆ ಇಟ್ಟಿಗೆ ಕಲ್ಲುಗಳಿಂದಲೂ ದಾಳಿ ನಡೆಸಿದ್ದರು.
Key words: Bidadi town ship, Case, against , 10 farmers







