ಚಿಕ್ಕಮಗಳೂರು,ಜುಲೈ,27,2026 (www.justkannada.in): ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ದ ಮುಸ್ಲೀಮರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದ್ದು, ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ 353(2) ಅಡಿ ಎಫ್ ಐಆರ್ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಎಂಎಲ್ ಸಿ ಸಿಟಿ ರವಿಗೆ ಪೊಲೀಸರು ಎರಡು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಹಾಜಾರಾಗಲು ಸೂಚಿಸಿದ್ದು ಸಿ.ಟಿ ರವಿ ಅವರು 7 ದಿನಗಳ ಸಮಯ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಸಮಯ ನೀಡಲು ನಿರಾಕರಿಸಿರುವ ಪೊಲೀಸರು ಇಂದೇ ಹಾಜರಾಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಸಿ.ಟಿ ರವಿ ಅವರ ವಿರುದ್ದ ಮುಸ್ಲೀಮರ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಬಸವನಹಳ್ಳಿಯಲ್ಲಿರುವ ನಿವಾಸಕ್ಕೆ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಡಿಎಆರ್ ಸ್ಥಳೀಯ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
Key words: MLC, CT Ravi, Notice Police







