ರಾಮನಗರ,ಜುಲೈ,28,2026 (www.justkannada.in): ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ ಎಂದು ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಾಲಕೃಷ್ಣ, ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ. ಕಾನೂನು ಕೈಗೆತ್ತಿಕೊಂಡವರ ವಿರುದ್ದ ಕೇಸ್ ಹಾಕಲಾಗಿದೆ ಎಂದರು.
ಬಿಡದಿ ಟೌನ್ ಶಿಪ್ ಯೋಜನೆ ಅದರ ಪಾಡಿಗೆ ಅದು ನಡೆಯುತ್ತದೆ. ಯೋಜನೆ ಆರಂಭಕ್ಕೆ ನೋಟಿಫಿಕೇಷನ್ ಆಗಿದೆ. ಜಮೀನು ನೀಡುವ ರೈತರು ಪರಿಹಾರ ಪಡೆಯುತ್ತಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.
Key words: No case, filed, Bidadi Township, activists, MLA, Balakrishna






