ಮೈಸೂರು,ಜುಲೈ.29,2026 (www.justkannada.in): ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯ ಭರ್ತಿಯಾಗದೇ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶದ ವಿರುದ್ದ ರಾಜ್ಯದಲ್ಲಿ ಆಕ್ರೋಶದ ಜ್ವಾಲೆ ಭುಗಿಲೆದ್ದಿದೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ರೈತಮುಖಂಡ ಬಡಗಲಪುರ ನಾಗೇಂದ್ರ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಅದೇಶ ಅವೈಜ್ಞಾನಿಕವಾದುದು . ಆ ಆದೇಶ ವಿರೋಧಿಸುತ್ತೇವೆ. ರಾಜ್ಯದ 157 ತಾಲ್ಲೂಕುಗಳಲ್ಲಿ ಬರವಿದೆ. ಕಾವೇರಿ ಜಲಾನಯನ ಪ್ರದೇಶದಲ್ಲೂ ಮಳೆ ಕಡಿಮೆ ಇದೆ. ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ರೈತರ ಹಿತ ಕಾಯಲು ಎಲ್ಲ ಪಕ್ಷಗಳು ಒಂದಾಗಬೇಕು ಎಂದು ತಿಳಿಸಿದ್ದಾರೆ.
Key words: CWRC, order, release, water, Tamil Nadu, unscientific, Badagalapura Nagendra







