ಬೆಂಗಳೂರು,ಆಗಸ್ಟ್,3,2026 (www.justkannada.in): ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಂಪುಟ ವಿಸ್ತರಣೆಯಾಗುತ್ತಿರುವುದು ಖುಷಿಯ ವಿಚಾರ ಸಚಿವನಾಗಿ ಕೆಲಸ ಮಾಡಿದ್ದೀನಿ ಬೇರೆಯವರಿಗೆ ಅವಕಾಶ ಕೊಡಬೇಕು. ನಾನು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು. ಬೇರೆಯವರಿಗೆ ಅವಕಾಶ ಸಿಗಲಿ ಎಂದಿದ್ದಾರೆ.
ಇಂದು ಸಚಿವ ಸಂಪುಟ ವಿಸ್ತರಣೆಯಾಗುವ ಮೂಲಕ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕ್ಯಾಬಿನೆಟ್ ಭರ್ತಿಯಾಗಿದ್ದು ಖಾತೆ ಹಂಚಿಕೆಯೂ ಆಗಲಿದೆ.
Key words: I didn’t, expect, chance, Minister Position, Dinesh Gundu Rao






