Saturday, August 8, 2026

BDA Apartments

Home Front Page ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ  ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಪಾದಯಾತ್ರೆಯಲ್ಲಿ ಭಾಗಿಯಾಗಲು ಕಾರ್ಯಕರ್ತರಿಗೆ ಕರೆ ನೀಡುತ್ತೇವೆ. ಬೆಂಗಳೂರಿನಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಸಮಾವೇಶ ಮಾಡುತ್ತೇವೆ ಸಮನ್ವಯ ಸಮಿತಿ ಬಗ್ಗೆ ಇನ್ನು ಎರಡು ಮೂರು ದಿನಗಳಲ್ಲಿ ತೀರ್ಮಾನ ಆಗುತ್ತದೆ. ಎಂದರು.

ಜಿಲ್ಲೆ ಮಟ್ಟದಲ್ಲಿ ಕೂಡ ಒಟ್ಟಿಗೆ ಹೋರಾಟ ಮಾಡುತ್ತೇವೆ. ನಾಗೇಂದ್ರ ವಿರುದ್ದ ಹೋರಾಟದ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ. ಜಂಟಿ ಶಾಸಕಾಂಗ ಸಭೆ ಕರೆಯುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ಆರ್. ಅಶೋಕ್ ತಿಳಿಸಿದರು.

Key words: BJP-JDS , fight, against, Bidadi Township, R. Ashok