ಬೆಂಗಳೂರು,ಆಗಸ್ಟ್,26,2026 (www.justkannada.in): ಬರ ಅಧ್ಯಯನದ ನೆಪದಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದ ಬಿಜೆಪಿ ನಾಯಕರು, ಆ ಕುರಿತು ಸದನದಲ್ಲಿ ಚರ್ಚಿಸಿದೇ ರಾಜಕೀಯ ಮಾಡುವುದರಲ್ಲೇ ಕಾಲ ಕಳೆದಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದರು.
ಇಂದು ಮಾತನಾಡಿದ ಡಿಸಿಎಂ ಪರಮೇಶ್ವರ್, ಬಿಜೆಪಿಯವರು ಮುಖ್ಯಮಂತ್ರಿಗಳಿಗಾಗಲಿ ಅಥವಾ ನನಗಾಗಲಿ ಯಾವುದೇ ವರದಿ ಅಥವಾ ಸಲಹಾ ಪತ್ರ ನೀಡಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ಕೇವಲ ರಾಜಕೀಯ ಮಾಡುವುದರಲ್ಲೇ ವಿಪಕ್ಷ ಕಾಲ ಕಳೆದಿದೆ ಎಂದು ಕಿಡಿಕಾರಿದರು.
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕೇವಲ ರಾಜಕೀಯ ಪ್ರೇರಿತ ಪಾದಯಾತ್ರೆ ನಡೆಸುತ್ತಿದೆ. ನಾಗೇಂದ್ರ ಅವರ ರಾಜೀನಾಮೆ ಹಾಗೂ ಸಂಪುಟ ಪುನರ್ರಚನೆ ಕುರಿತಂತೆ ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
Key words: BJP, wasted time, politics, DCM, Parameshwara







