Thursday, August 27, 2026

BDA Apartments

Home Front Page 175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್,  ಕೊಳ್ಳೆ ಹೊಡದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ. 4 ತಿಂಗಳ ಬಳಿಕ ಬರಪೀಡಿತ ತಾಲ್ಲೂಗಳನ್ನ ಘೋಷಣೆ ಮಾಡಿದ್ದಾರೆ . ಕಾಟಾಚಾರಕ್ಕೆ ಬರ ತಾಲ್ಲೂಕುಗಳನ್ನ ಘೋಷಣೆ ಮಾಡಿದ್ದಾರೆ ಎಂದು ಕಿಡಿಕಾರಿದರು.

4 ತಿಂಗಳ ಹಿಂದೆಯೇ  ನಾನು ಸರ್ಕಾರಕ್ಕೆ ಪತ್ರ ಬರೆದಿದ್ದೆ. ಬರಪೀಡಿತ ಸ್ಥಳಕ್ಕೆ ನಾನು ಬಿಜೆಪಿ ಅಧ್ಯಯನ ತಂಡ ಹೋಗಿತ್ತು.  175  ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು ಎಂದು ಆರ್.ಅಶೋಕ್ ತಿಳಿಸಿದರು.

Key words: 175 taluks, declared, drought-affected, R. Ashok